ಎಲ್ಲರಿಗೂ ನಮಸ್ಕಾರ, ನೀವು ಹೊಸ ರೇಷನ್ ಕಾರ್ಡ್ಗೆ (New Ration Card Application) ಅರ್ಜಿ ಸಲ್ಲಿಸಬೇಕಾ…? ಹಾಗಿದ್ದರೆ ಇಲ್ಲಿದೆ ನಿಮಗೆ ಸಿಹಿ ಸುದ್ಧಿ. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗೃಹ ಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಅಗತ್ಯ. ಅದಕ್ಕಾಗಿ ಬಹಳಷ್ಟು ಜನರು ಕಾಯುತ್ತಿದ್ದಾರೆ. ಇದೀಗ ಆನ್ಲೈನ್ ಅರ್ಜಿ ಆರಂಭವಾಗಿದ್ದು, ಅರ್ಹರು ಅರ್ಜಿ ಸಲ್ಲಿಬಹುದಾಗಿದೆ.
Karnataka New Ration Card Application Date:
ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಅರ್ಹ ಫಲಾನುಭವಿಗಳಿಗೆ ಇದೊಂದು ಅನುಕೂಲಕರ ಸಮಯವಾಗಿದ್ದು, ಅರ್ಜಿ ಸಲ್ಲಿಸಲು ಎರಡು ದಿನ ಕಾಲಾವಕಾಶ ನೀಡಲಾಗಿದೆ.
ಇಂದು (14-03-2024 ರಂದು) ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, 11 ಗಂಟೆಯಿಂದ 1 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?:
ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಕಂಪೂಟರ್ ಸೆಂಟರ್ಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಬಹುದಾಗಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಯಿತು. ಪ್ರತಿ ಕುಟುಂಬದ ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಹಣ ವರ್ಗಾವಣೆ ಮಾಡಲಾಗುತ್ತಿದೆ. ಮತ್ತು ಅನ್ನಭಾಗ್ಯ ಯೋಜನೆಯ ಅಡಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ ಅಕ್ಕಿ ಬದಲಿಗೆ ಕುಟುಂಬದ ಪ್ರತಿ ಸದಸ್ಯರಿಗೆ 170 ರೂ. ರಂತೆ ಹಣ ನೀಡಲಾಗುತ್ತಿದೆ. ಅದಕ್ಕಾಗಿ ರೇಷನ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಾಗಿದೆ.
New Ration Card Application Online Link
ಹೊಸ ರೇಷನ್ ಕಾರ್ಡ್ ಅರ್ಜಿ: Apply Online
ಇತರೆ ಮಾಹಿತಿಗಳನ್ನು ಓದಿ
ಕೃಷಿ ಭಾಗ್ಯ ಯೋಜನೆ: ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ
Ration Card
For apply new ratoncaed
Sir, aprilnalli yaavaga apply maadodu